ತಾಯಿ ಸಾವಿನ ಚಿಂತೆಯಲ್ಲಿ ಮಗ ಆತ್ಮಹತ್ಯೆ

Update: 2023-10-28 15:54 GMT

ಕೊಲ್ಲೂರು, ಅ.28: ತಾಯಿ ಮೃತಪಟ್ಟ ಚಿಂತೆಯಲ್ಲಿ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.26ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ವಿಶ್ವನಾಥ(37) ಎಂದು ಗುರುತಿಸಲಾಗಿದೆ.

ಇವರ ತಾಯಿ ಗಿರಿಜಾಮ್ಮ ಅ.26ರಂದು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಮುಗಿಸಿ ಮನೆಯಲ್ಲಿ ಮಲಗಿದ್ದ ಇವರು ತಾಯಿಯ ಚಿಂತೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News