ಸುನಿಲ್ ಕುಮಾರ್ ನಡವಳಿಕೆ ಖಂಡನೀಯ: ಹರಿಪ್ರಸಾದ್ ಶೆಟ್ಟಿ

Update: 2023-11-25 14:10 GMT

ಫೈಲ್‌ ಫೋಟೊ 

ಉಡುಪಿ : ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಜಿಲ್ಲೆಯ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾ‌ರ್ ರವರಿಗೆ ಕಾನೂನುಬದ್ದವಾಗಿ ಕರ್ತವ್ಯನಿರ್ವಹಿಸಿದಕ್ಕೆ ಜಿಲ್ಲೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಎದುರು ಆತ್ಮ ಸ್ಥೈರ್ಯ ಕುಸಿಯುವಂತೆ ತರಾಟೆಗೆ ತೆಗೆದು ಕೊಂಡಿರುವುದನ್ನು ಮತ್ತು ಈ ಕುರಿತು ಸಭೆ ಯಲ್ಲಿ ಅಧಿಕಾರಿಗೆ ಮಾತನಾಡಲು ಬಿಡದೆ ಇರುವುದನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಡಿ ತೀವ್ರವಾಗಿ ಖಂಡಿಸಿದ್ದಾರೆ.

ಬಿಜೆಪಿ ಆಡಳಿತದ 3 ವರ್ಷದ ಅವಧಿಯಲ್ಲಿ ಸುನೀಲ್ ಕುಮಾರವರು ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ತನಗೆ ಬೇಕಾದ ಅಧಿಕಾರಿಗನ್ನು ಹಾಕಿಸಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿರುವುನ್ನು ಜಿಲ್ಲೆಯ ಜನತೆ ಮರೆತಿಲ್ಲ. ಸುನೀಲ್ ಕುಮಾರ್ ಸಚಿವರಾಗಿದ್ದಾಗ ಪೋಲಿಸ್ ಠಾಣೆಗಳು ಮಟ್ಕಾ ಬಿಡ್ಡರ, ಕ್ಲಬ್ ಮಾಲಿಕರ ಮತ್ತು ಸಮಾಜಘಾತಕ ಶಕ್ತಿಗಳ ಹತೋಟಿ ಯಲ್ಲಿದ್ದು , ಸಜ್ಜನರು ಮತ್ತು ಬಡವರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದು ಅವರು ಹೇಳಿಕೆಯಲ್ಲಿ ಟೀಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News