ಯುವಕ ನಾಪತ್ತೆ

Update: 2023-10-03 14:15 GMT

ಉಡುಪಿ, ಅ.3: ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಅಣ್ಣಪ್ಪ (30) ಎಂಬ ವ್ಯಕ್ತಿಯು ಸೆ.28ರಂದು ಮನೆ ಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ:9480805460, ಬೈಂದೂರು ವೃತ್ತನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ:100(0820-2526444)ಅನ್ನು ಸಂಪರ್ಕಿಸ ಬಹುದು ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News