ಉಡುಪಿ: ಕಸಾಪದಿಂದ ಯಂಡಮೂರಿಗೆ ಗೌರವ

Update: 2023-11-03 13:55 GMT

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡಿಗರಲ್ಲೂ ಅಪಾರ ಜನಪ್ರಿಯರಾಗಿರುವ ಪ್ರಸಿದ್ಧ ತೆಲುಗು ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರನ್ನು ಉಡುಪಿ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಸನ್ಮಾನಿಸಿದರು.

ಸಮಾರಂಭದಲ್ಲಿ ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಪಿ.ವಿ ಭಂಡಾರಿ, ಹರ್ಷದ ಆಡಳಿತ ನಿರ್ದೇಶಕರಾದ ಸೂರ್ಯಪ್ರಕಾಶ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಮನೋರೋಗ ತಜ್ಞ ಡಾ.ವಿರೂಪಾಕ್ಷ ದೇವರಮನೆ, ಬಿಲ್ಲವರ ಸೇವಾ ಸಂಘ ಬನ್ನಂಜೆ ಇದರ ಅಧ್ಯಕ್ಷ ಮಾಧವ ಬನ್ನಂಜೆ ಉಪಸ್ಥಿತ ರಿದ್ದರು.

ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಮೋಹನ್ ಉಡುಪ, ಕಸಾಪ ಬೈಂದೂರು ತಾಲೂಕು ಅಧ್ಯಕ್ಷ ಡಾ. ರಘು ನಾಯ್ಕ, ಕಸಾಪ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣಿೈ, ಸಾಹಿತಿ ಗಿರಿಜಾ ಗಾಂವ್ಕರ್, ಗೀತಾ ಕುಂದಾಪುರ, ಶಿಲ್ಪಾ ಜೋಶಿ, ನರಸಿಂಹಮೂರ್ತಿ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News