ಉಡುಪಿ| ಬೊಲೆರೊ ವಾಹನ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

Update: 2024-01-21 07:08 GMT

ಉಡುಪಿ: ಬೊಲೆರೊ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ಅಂಬಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.20ರಂದು ರಾತ್ರಿ 9ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಸವಾರ ಕೊಳಲಗಿರಿಯ ರಾಕೇಶ್(27) ಎಂದು ಗುರುತಿಸಲಾಗಿದೆ. ಮೃತ ರಾಕೇಶ್  ಸ್ಕೂಟರ್‌ನಲ್ಲಿ ಕೆಲಸದ ನಿಮಿತ್ತ ಕಟಪಾಡಿಗೆ ಹೋಗಿ ವಾಪಾಸ್ ಉಡುಪಿ ಕಡೆ ಬರುತ್ತಿದ್ದಾಗ ಬೊಲೆರೊ ಪಿಕಪ್ ವಾಹನ ಎದುರಿನಲ್ಲಿದ್ದ ದ್ವಿಚಕ್ರ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅತೀವೇಗದಿಂದ ಬಂದು ರಾಕೇಶ್ ಸ್ಕೂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದ ಎನ್ನಲಾಗಿದೆ. ಪರಿಣಾಮ ರಾಕೇಶ್ ಸ್ಕೂಟರ್ ನಿಂದ ಹಾರಿದ್ದು, ಅವರು  ಬೊಲೆರೋ ವಾಹನಕ್ಕೆ ತಾಗಿ  ರಸ್ತೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ರಾಕೇಶ್ ಮೇಲೆಯೇ ಬೊಲೆರೋ ವಾಹನವನ್ನು ಹರಿದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ರಾಕೇಶ್, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News