ನ.25ರಂದು ಉಡುಪಿ ಜಿಲ್ಲಾ ಮಟ್ಟದ ಸಾಮೂಹಿಕ ನೃತ್ಯ ಸ್ಪರ್ಧೆ

Update: 2023-11-04 11:57 GMT

ಉಡುಪಿ, ನ.4: ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಪಂಡಿತ್ ಜವಾಹರಲಾಲ್ ನೆಹೂರು ಅವರ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಆಚರಿಸಲ್ಪಡುವ ಮಕ್ಕಳ ದಿನಾಚರಣೆಯ ಪ್ರಯುಕ್ತ ಜರಗವ ಯು.ಎಫ್.ಸಿ. ಮಕ್ಕಳ ಹಬ್ಬ-2023 ಕಾರ್ಯಕ್ರಮ ದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆ ಯನ್ನು ನ.25ರಂದು ಬೆಳಗ್ಗೆ 9.30ರಿಂದ ಸಂಜೆ ಗಂಟೆ 4.30ರ ತನಕ ಉದ್ಯಾವರ ಶ್ರೀವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಜೇತ ತಂಡಗಳಿಗೆ ಎರಡೂ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ 8,000ರೂ., ದ್ವಿತೀಯ 6,000ರೂ., ತೃತೀಯ 4,000ರೂ. ನಗದು ಬಹು ಮಾನ, ಸ್ಮರಣಿಕೆ, ಪ್ರಮಾಣ ಪತ್ರ ಮತ್ತು ಈ ಹಬ್ಬದಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೂ ತಲಾ 1,500ರೂ. ನಗದು ಮತ್ತು ಸ್ಮರಣಿಕೆ, ಪ್ರಮಾಣ ಪತ್ರ ನೀಡಲಾಗುವುದು.

ಆಸಕ್ತ ಶಾಲಾ ತಂಡಗಳು ಮುದ್ರಿತ ಪ್ರವೇಶ ಪತ್ರ ತುಂಬಿಸಿ ಮುಖ್ಯೋ ಪಾಧ್ಯಾಯರ ಸಹಿಯೊಂದಿಗೆ ನ.20ರೊಳಗೆ ಅಬಿದ್ ಆಲಿ (9663439516) ಪ್ರಧಾನ ಕಾರ್ಯದರ್ಶಿ, ಉದ್ಯಾವರ ಫ್ರೆಂಡ್ಸ್ ಸರ್ಕಲ್, ಉದ್ಯಾವರ - 574118, ಉಡುಪಿ. ಇವರಿಗೆ ಕಳುಹಿಸಿ ಕೊಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ತಿಲಕ್‌ರಾಜ್ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News