ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ.28 ರಂದು ವಿದ್ಯಾರ್ಥಿ-ಪೋಷಕರ ಸಮಾವೇಶ

Update: 2023-10-26 08:23 GMT

ಉಡುಪಿ, ಅ.26: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ‘ನೈತಿಕ ವೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಗಳು’ ಎಂಬ ವಿಷಯದ ಕುರಿತು ವಿದ್ಯಾರ್ಥಿ- ಪೋಷಕರ ಸಮಾವೇಶವನ್ನು ಅ.28ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಉಡುಪಿ ಮಿಷನ್ ಕಂಪೌಂಡ್‌ನ ಯುಬಿಎಂಸಿ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಭಾರತದ ಪ್ರಸಿದ್ಧ ಪ್ರೇರಕಾ ಭಾಷಣಕಾರ ಮುನಾವರ್ ಝಮಾ ಹೈದರಬಾದ್, ಪ್ರಸಿದ್ಧ ಚಿಂತಕ ಬೆಂಗಳೂರಿನ ಡಾ.ತಾಹ ಮತೀನ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News