ಉಡುಪಿ: ಮಹಾತ್ಮಾ ಗಾಂಧಿ ಹುತಾತ್ಮರಾದ ದಿನ ಜನವರಿ 30 ರಂದು "ಸೌಹಾರ್ದ ಮಾನವ ಸರಪಳಿ"; ಭಿತ್ತಿಪತ್ರ ಬಿಡುಗಡೆ

Update: 2024-01-25 05:34 GMT

ಉಡುಪಿ: ಮಹಾತ್ಮ ಗಾಂಧಿ ಹುತಾತ್ಮರಾದ ದಿನವಾದ ಜನವರಿ 30 ರಂದು ರಾಜ್ಯಾದ್ಯಂತ ಸೌಹಾರ್ದ ಕರ್ನಾಟಕ ಸಂಘಟನೆಯು "ಸೌಹಾರ್ದ ಮಾನವ ಸರಪಳಿ" ಆಯೋಜಿಸಿದ್ದು ಅದರ ಅಂಗವಾಗಿ ಉಡುಪಿಯ ಕ್ಲಾಕ್ ಟವರ್ ಬಳಿ ಮಾನವ ಸರಪಳಿ ಆಯೋಜಿಸಲಾಗಿದೆ.

ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಯ ವತಿಯಿಂದ ಮಾನವ ಸರಪಳಿಗೆ ಸಂಬಂಧಿಸಿದ ಭಿತ್ತಿಪತ್ರ ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮವು ಜನವರಿ 30 ರ ಸಂಜೆ 4.30 ಕ್ಕೆ ಸರಿಯಾಗಿ ಕ್ಲಾಕ್ ಟವರ್ ಬಳಿ ನಡೆಯಲಿರುವುದೆಂದು ಸಂಘಟಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಯ ಹೊಣೆಗಾರರಾದ ಬಾಲಕೃಷ್ಣ ಶೆಟ್ಟಿ, ಸುಂದರ್ ಮಾಸ್ತರ್, ಪ್ರೊ.ಫಣಿರಾಜ್, ಡಾ‌.ಜೆರಾಲ್ಡ್ ಪಿಂಟೋ,ರೊನಾಲ್ಡ್, ಸಂಜೀವ್ ಬಳ್ಕೂರು,ಶಶಿಧರ್,ಕವಿರಾಜ್,ಮೋಹನ್ ಮತ್ತು ಸಂತೋಷ್ ಕರ್ವೆಲೋ,ಇದ್ರಿಸ್ ಹೂಡೆ, ಅಬ್ದುಲ್ ಅಝೀಝ್ ಉದ್ಯಾವರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News