ಉಡುಪಿ ಗ್ಯಾಂಗ್‌ವಾರ್: ಮತ್ತೋರ್ವ ಆರೋಪಿಯ ಬಂಧನ

Update: 2024-05-25 07:58 GMT

ಉಡುಪಿ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 19ರಂದು ನಸುಕಿನ ವೇಳೆ ನಡು ರಸ್ತೆಯಲ್ಲಿಯೇ ನಡೆದ ಗ್ಯಾಂಗ್ ವಾರ್‌ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಸಕ್ಲೈನ್ ಎಂದು ಗುರುತಿಸಲಾಗಿದೆ. ಈ ಹಿಂದೆ ಈ ಪ್ರಕರಣದಲ್ಲಿ ಕಾಪುವಿನ ಆಶಿಕ್ ಮತ್ತು ಗುಜ್ಜರಬೆಟ್ಟುವಿನ ರಾಕೀಬ್ ಬಂಧಿಸಲಾಗಿತ್ತು. ಈ ಎರಡು ತಂಡಗಳಲ್ಲಿ ಒಟ್ಟು 7-8 ಮಂದಿ ಇದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದು ವರೆಸಿದ್ದಾರೆ. ಇವರೆಲ್ಲ ಗರುಡ ಗ್ಯಾಂಗಿನವರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಗ್ಯಾಂಗ್ ಹೆಚ್ಚು ಸಕ್ರಿಯವಾಗಿಲ್ಲ. ಗ್ಯಾಂಗ್ ಒಳಗಿನ ದ್ವೇಷ ಹಾಗೂ ಒಳಜಗಳವೇ ಈ ದಾಳಿಗೆ ಕಾರಣ. ಈವರೆಗೆ ಒಟ್ಟು ಮೂವರನ್ನು ಬಂಧಿಸ ಲಾಗಿದ್ದು, ಉಳಿದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News