ಉಡುಪಿ: ಸಿಡಿಲು ಬಡಿದು ಮನೆಗೆ ಹಾನಿ, ಬಾಲಕಿಗೆ ಗಾಯ

Update: 2024-10-08 07:55 GMT

ಉಡುಪಿ, ಅ.8: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಹಲವು ಸೊತ್ತುಗಳು ಹಾನಿಗೊಳಗಾಗಿದ್ದು, ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಪೆರಂಪಳ್ಳಿ ಎಂಬಲ್ಲಿ ಸೋಮವಾರ ರಾತ್ರಿ ವೇಳೆ ನಡೆದಿದೆ.

ರಾತ್ರಿ ವೇಳೆ ಉಡುಪಿಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ ಸಂದರ್ಭ ಪೆರಪಂಳ್ಳಿಯ ಕಮಲ ಪೂಜಾರ್ತಿ ಎಂಬವರ ಮನೆಗೆ ಸಿಡಿಲು ಬಡಿಯಿತ್ತೆನ್ನಲಾಗಿದೆ. ಇದರ ಪರಿಣಾಮ ಮನೆಯಲ್ಲಿದ್ದ 9ನೇ ತರಗತಿಯ ವಿದ್ಯಾರ್ಥಿನಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೇ ರೀತಿ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆಯ ಹೆಂಚು, ವಿದ್ಯುತ್ ಸಲಕರಣೆಗಳು, ಟಿವಿ ಸೇರಿದಂತೆ ಇಲೆಕ್ಟ್ರಾನಿಕ್ಸ್ ವಸ್ತುಗಳಿಗೆ ಹಾನಿಯಾಗಿದೆ. ಇದರಿಂದ ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News