ಉಡುಪಿ: 40 ವರ್ಷಗಳ ಆಸೆಗಾಗಿ ಅಮ್ಮನ ಜೊತೆ ಕೃಷ್ಣಮಠಕ್ಕೆ ಭೇಟಿ ನೀಡಿದ ಜ್ಯೂ. ಎನ್.ಟಿ.ಆರ್.

Update: 2024-08-31 12:54 GMT

ಉಡುಪಿ, ಆ.31: ತೆಲುಗು ಚಿತ್ರನಟ ಜ್ಯೂನಿಯರ್ ಎನ್.ಟಿ.ಆರ್. ತನ್ನ ತಾಯಿ ಜೊತೆ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇವರ ಜೊತೆ ಕನ್ನಡ ಚಿತ್ರನಟ ನಿರ್ದೇಶಕ ರಿಷಭ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಭಾಗಿಯಾಗಿದ್ದರು.

ಶ್ರೀಕೃಷ್ಣ ದರ್ಶನದ ಬಳಿಕ ಇವರು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರನ್ನು ಗೌರವಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜ್ಯೂನಿಯರ್ ಎನ್‌ಟಿಆರ್, 40 ವರ್ಷಗಳಿಂದ ನನ್ನ ಅಮ್ಮನಿಗೆ ಕೃಷ್ಣ ಮಠಕ್ಕೆ ಬರಬೇಕೆಂಬ ಆಸೆ ಇತ್ತು. ಅದು ಇವತ್ತು ಈಡೇರಿದೆ. ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿರು ವುದು ತುಂಬಾ ಸಂತೋಷವಾಗಿದೆ. ಇದೆಲ್ಲವೂ ದೇವರ ಸ್ಕ್ರೀನ್ ಪ್ಲೇ ಆಗಿದೆ ಎಂದು ಹೇಳಿದರು.

ರಿಷಬ್ ಶೆಟ್ಟಿ ತುಂಬಾ ಇಷ್ಟ ಪಟ್ಟ ದೇವರು ಕೊಟ್ಟ ಗೆಳೆಯ. ರಿಷಬ್ ಜೊತೆ ಮಠಕ್ಕೆ ಬಂದಿರುವುದು ಖುಷಿಯಾಗಿದೆ. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ನಮ್ಮ ಜೊತೆಗಿದ್ದಾರೆ. ನನ್ನ ಅಮ್ಮನ ಪೂರ್ವಿಕರು ಮೂಲತಃ ಕುಂದಾಪುರದವರು. ಕೃಷ್ಣ ಮಠಕ್ಕೆ ಭೇಟಿ ಕೊಟ್ಟು ಮನಶಾಂತಿ ಸಿಕ್ಕಿದೆ. ಸರ್ವೇ ಜನ ಸುಖಿನೋ ಭವಂತು ಎಂದು ದೇವರಲ್ಲಿ ಬೇಡಿಕೊಂಡಿ ದ್ದೇನೆ. ನಾನು ಮನೆಯಲ್ಲಿ ಪ್ರತಿದಿನ ಉಡುಪಿ ಊಟ ಮಾಡುತ್ತೇನೆ. ಕೃಷ್ಣಮಠದಲ್ಲಿ ಮಾಡುವ ಊಟವನ್ನು ನಾನು ಪ್ರತಿದಿನ ಮನೆಯಲ್ಲೇ ಮಾಡುತ್ತೇನೆ ಎಂದರು.

ನಟ ರಿಷಬ್ ಶೆಟ್ಟಿ ಮಾತನಾಡಿ, ಜ್ಯೂನಿಯರ್ ಎನ್‌ಟಿಆರ್ ಜೊತೆ ಅಣ್ಣ ತಮ್ಮನ ಸಂಬಂಧ ಫೀಲ್ ಆಗುತ್ತದೆ. ಅವರು ಆಂಧ್ರಪ್ರದೇಶದವರು ಎಂಬ ಭಾವನೆ ಬರಲ್ಲ. ಬಹಳ ಸಮಯದ ನಂತರ ಭೇಟಿಯಾಗುವ ಅವಕಾಶ ಸಿಕ್ಕಿತು. ಇತ್ತೀಚೆಗೆ ಉಡುಪಿ ಮಠಕ್ಕೆ ಬರಬೇಕು ಎಂದು ಹೇಳಿಕೊಂಡಿದ್ದರು. ನಾನು ಈ ಕಡೆಗೆ ಇದ್ದಿರುವುದರಿಂದ ಅವರೊಂದಿಗೆ ಮಠಕ್ಕೆ ಬಂದಿದ್ದೇನೆ. ಎನ್‌ಟಿಆರ್ ಕುಟುಂಬದ ಜೊತೆ ಬಂದಿರುವುದು ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು.






 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News