ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Update: 2023-10-28 15:16 GMT

ಉಡುಪಿ, ಅ.28: ಮಹರ್ಷಿ ವಾಲ್ಮೀಕಿ ಅವರ ಆದರ್ಶ, ಚಿಂತನೆಗಳ ಪಾಲನೆಯಿಂದ ವ್ಯಕ್ತಿತ್ವದಲ್ಲಿ ಸಕಾರಾತ್ಮಕ ಬದಲಾ ವಣೆ ಸಾಧ್ಯ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಒಬ್ಬ ಬೇಟೆಗಾರನ ಕುಟುಂಬದಲ್ಲಿ ಜನಿಸಿದ್ದರೂ, ನಂತರದಲ್ಲಿ ವ್ಯಕ್ತಿತ್ವದ ಬದಲಾವಣೆಯಿಂದಾಗಿ ಹಲವಾರು ಆದರ್ಶ ಪುರುಷರಲ್ಲಿ ಇವರು ಒಬ್ಬರಾಗಿದ್ದಾರೆ ಎಂದರು. ಪರಿಶಿಷ್ಟ ಪಂಗಡದ ವರ್ಗದವರಿಗೆ ಸರಕಾರ ಹಲವಾರು ಕಾರ್ಯ ಕ್ರಮಗಳನ್ನು ಜಾರಿಗೆ ತಂದಿದ್ದು, ಅನುಷ್ಟಾನಗೊಳಿಸಲಾದ ಯೋಜನೆ ಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಬೇಡನಾಗಿದ್ದ ವಾಲ್ಮೀಕಿ ಮಹರ್ಷಿ ಯಾಗಿ ಬದಲಾವಣೆ ಯಾಗಿದ್ದು, ಇಂತಹ ವ್ಯಕ್ತಿತ್ವದ ಬದಲಾವಣೆಯನ್ನು ಅವರಲ್ಲಿ ಕಾಣಬಹುದಾ ಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಅಸಾಧಾರಣ ಕೆಲಸವನ್ನು ಇವರು ಮಾಡಿದ್ದಾರೆ ಎಂದರು.

ಒಂದು ಕ್ರೌಂಚ ಪಕ್ಷಿಗಳ ಚಿಕ್ಕ ಘಟನೆ ಬೇಡನಾಗಿದ್ದ ಇವರ ಬದುಕನ್ನೇ ಬದಲಾಯಿಸಿತು. ಆ ಮಾನವೀಯ ಸ್ಪರ್ಶವನ್ನು ಅವರ ಜೀವನದಲ್ಲಿ ಅಳವಡಿಸಿಕೊಂಡು, ಆ ಮೂಲಕ ಇಡೀ ಜಗತ್ತಿಗೆ ರಾಮಾಯಣ ಕೃತಿಯನ್ನು ಕೊಡುಗೆಯಾಗಿ ನೀಡು ತ್ತಾರೆ. ಇವರ ರಾಮಾಯಣ ಕೃತಿ ವಿವಿಧ ರೂಪಗಳಲ್ಲಿ ಸಾವಿರಾರು ಭಿನ್ನ ರಾಮಾಯಣದ ರೂಪಗಳನ್ನು ಜಾನಪದಗಳಲ್ಲಿ ನಾವು ಇಂದಿಗೂ ಕಾಣಬಹುದಾಗಿದೆ ಎಂದರು.

ಮಹರ್ಷಿ ವಾಲ್ಮೀಕಿ ಕುರಿತು ಲೇಖಕಿ ಡಾ. ರೇಖಾ ವಿ ಬನ್ನಾಡಿ ಉಪನ್ಯಾಸ ನೀಡಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರಿಗೆ ಅಕ್ಷರಜ್ಞಾನ ಇಲ್ಲದ ಸಂದರ್ಭದಲ್ಲಿಯೂಅಕ್ಷರವನ್ನು ಕಲಿತು ಮಹಾನ್ ಗ್ರಂಥವಾದ ರಾಮಾಯಣ ವನ್ನು ರಚಿಸಿ ದರು. ಅನೇಕ ಮಾನವಿಯ ಮೌಲ್ಯಗಳನ್ನು ರಾಮಾಯಣದಲ್ಲಿ ಪ್ರತಿಪಾದಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ವಿವಿಧ ಸಾಧಕರನ್ನು ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾ ಯಿತು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್ ಸ್ವಾಗತಿಸಿ, ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಶೆಟ್ಟಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News