ಉಡುಪಿ: ಮಾನವ ಸರಪಳಿಯಲ್ಲಿ ಭಾಗವಹಿಸಿ, ಪ್ರಮಾಣಪತ್ರ ಪಡೆಯಿರಿ...

Update: 2024-09-13 15:08 GMT

ಉಡುಪಿ: ಸೆಪ್ಟಂಬರ್ 15ರಂದು ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ರಾಜ್ಯ ಸರಕಾರದಿಂದ ಪ್ರಶಂಸನಾ ಪತ್ರವನ್ನು ಪಡೆಯಬಹು ದಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರ ಛಾಯಾಚಿತ್ರವನ್ನು ಸಹ ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶ ನೀಡಲಾಗಿದೆ.

ಒಂದು ಫೋಟೋ ಫ್ರೇಮ್‌ನಲ್ಲಿ, 5 ಸದಸ್ಯರವರೆಗೆ ಅವಕಾಶವಿದ್ದು, ಕುಟುಂಬಗಳು ಒಟ್ಟಿಗೆ ನಿಲ್ಲಲು, ಚಿತ್ರವನ್ನು ತೆಗೆದು ಕೊಳ್ಳಲು, ಅದನ್ನು ಅಪ್‌ಲೋಡ್ ಮಾಡಲು ಮತ್ತು ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶವನ್ನು ಒದಗಿಸಲಾಗಿದೆ.

ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು, ಪ್ರವಾಸಿಗರು ಮಾನವ ಸರಪಳಿಯಲ್ಲಿ ಭಾಗವಹಿಸುವಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು - https://www.democracydaykarnataka.in/registration-ನಲ್ಲಿ ನೊಂದಾಯಿಸಿಕೊಂಡು ಪ್ರಮಾಣಪತ್ರವನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News