ಉಡುಪಿ: ಮುದ್ರಕರ ದಿನಾಚರಣೆ- ಹಿರಿಯ ಮುದ್ರಕರಿಗೆ ಸನ್ಮಾನ

Update: 2024-02-28 13:04 GMT

ಉಡುಪಿ: ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ವತಿಯಿಂದ ಮುದ್ರಕರ ದಿನಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಉಡುಪಿ ಪುರಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಉದ್ಘಾಟಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್. ಮತ್ತು ಗ್ಯಾಲಕ್ಸಿ ಇಮೇಜಿಂಗ್ ಟೆಕ್ನಾಲಜೀಸ್ ಬೆಂಗಳೂರು ಇದರ ಬಿಸಿನೆಸ್ ಮೆನೇಜರ್ ಎನ್.ಮೋಹನ್ ಮುಖ್ಯ ಅತಿಥಿಗಳಾಗಿದ್ದರು.

ಕರ್ನಾಟಕ ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿಯ ಸಂಚಾಲಕ ಮಹೇಶ್ ಕುಮಾರ್, ಸಹಸಂಚಾಲಕ ಅಶೋಕ್ ಶೆಟ್ಟಿ ಮತ್ತು ಉಡುಪಿ ಮುದ್ರಕರ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಬಿ.ಜಿ.ಸುಬ್ಬರಾವ್ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.

ಬೈಂದೂರು ಉಪ್ಪುಂದದ ವಿನಾಯಕ ಪ್ರಿಂಟರ್ಸ್‌ ಮಾಲಕ ಗೋಪಾಲ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ವಲಯಗಳ ಅಧ್ಯಕ್ಷರುಗಳಾದ ಪ್ರಶಾಂತ್ ನಾಯ್ಕ್, ಎಚ್. ವಾಸುದೇವ ವರ್ಣ, ಪ್ರವೀಣ್ ಶೆಣೈ, ಸುಧೀರ್ ಡಿ.ಬಂಗೇರ ಉಪಸ್ಥಿತರಿದ್ದರು.

ಸಂಘದ ಮಾಜಿ ಅಧ್ಯಕ್ಷ ರಮೇಶ್ ತಿಂಗಳಾಯ ರವರು ಸ್ವಾಗತಿಸಿದರು. ಸಂಘದ ಸಮಿತಿ ಸದಸ್ಯ ಸಂತೋಷ್ ಕುಮಾರ್ ಉದ್ಯಾವರ ಇವರು ಸನ್ಮಾನಪತ್ರ ವಾಚಿಸಿದರು. ಜಿಲ್ಲಾ ಕಾರ್ಯದರ್ಶಿ ಜಿ.ಎಂ.ಶರೀಫ್ ವಂದಿಸಿದರು. ಉಡುಪಿ ವಲಯ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News