ಉಡುಪಿ: ಬಿಜೆಪಿ ಹಿರಿಯ ನಾಯಕ ಸೋಮಶೇಖರ್ ಭಟ್ ನಿಧನ

Update: 2024-02-04 16:36 GMT

ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಎಂದೇ ಕರೆಸಿಕೊಳ್ಳುತ್ತಿದ್ದ ಹಿರಿಯ ನಾಯಕ ಮಲ್ಪೆ ಸೋಮಶೇಖರ ಭಟ್ಟ ಅವರು ಇಂದು ಸಂಜೆ ನಿಧನ ಹೊಂದಿದರು. ಅವರಿಗೆ 89 ವರ್ಷ ಪ್ರಾಯವಾಗಿತ್ತು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಉಡುಪಿ ಪುರಸಭೆಯ ಮಾಜಿ ಅಧ್ಯಕ್ಷರೂ ಆದ ಇವರು, ಜನರ ನಡುವೆ ಸೋಮಣ್ಣ ಎಂದೇ ಜನಪ್ರಿಯರು. ಆರೆಸ್ಸೆಸ್‌ನ ಹಿರಿಯ ಕಟ್ಟಾಳುವಾದ ಸೋಮಣ್ಣ, ಜನಸಂಘದ ಹಿರಿಯ ನಾಯಕರಾಗಿ ತನ್ನ ಶಿಷ್ಯರಾದ ದಿ. ಡಾ. ವಿ. ಎಸ್. ಆಚಾರ್ಯರೊಂದಿಗೆ ಬಿಜೆಪಿ ಪಕ್ಷವನ್ನು ಜಿಲ್ಲೆಯಲ್ಲಿ ಬಲಿಷ್ಠವಾಗಿ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವೃತ್ತಿಯಲ್ಲಿ ಉದ್ಯಮಿಯಾದ ಸೋಮಣ್ಣ, ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ ಸ್ಥಾಪಕ ಸದಸ್ಯರು. ಕುಂಜಿಬೆಟ್ಟು ಗ್ರಾಹಕರ ವಿವಿದ್ದೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತಿದ್ದರು.

ಕೊರೋನಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮಣ್ಣರಿಗೆ ಕರೆ ಮಾಡಿ ಆರೋಗ್ಯದ ಕುರಿತು ವಿಚಾರಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಸೋಮಣ್ಣ ಅವರ ನಿಧನಕ್ಕೆ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥರು, ಶಾಸಕ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News