ಉಡುಪಿ: ಕರಂಬಳ್ಳಿ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Update: 2024-08-26 11:08 GMT

ಮಣಿಪಾಲ, ಆ.26: ಕರಂಬಳ್ಳಿ ದೇವಸ್ಥಾನದ ಕೆರೆಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರವಿವಾರ ಸಂಜೆ ವೇಳೆ ನಡೆದಿದೆ.

ಇಂದ್ರಾಳಿ ನಿವಾಸಿ ಸಿದ್ಧಾರ್ಥ್ ಶೆಟ್ಟಿ(19) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮಣಿಪಾಲ ಎಂಐಟಿ ವಿದ್ಯಾರ್ಥಿಯಾಗಿದ್ದ ಸಿದ್ಧಾರ್ಥ್ ಅವರು ತನ್ನ ಗೆಳೆಯರೊಂದಿಗೆ ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದರು. ಅಲ್ಲಿ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಮೇಲಕ್ಕೆ ಎತ್ತಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News