ಉಡುಪಿ: ಅಡಿಕೆ ವ್ಯಾಪಾರಿ ಲಾಡ್ಜ್ ನಲ್ಲಿ ಆತ್ಮಹತ್ಯೆ

Update: 2023-12-18 07:32 GMT

ಉಡುಪಿ, ಡಿ.18: ಸಾಲ ತೀರಿಸಲಾಗದ ಚಿಂತೆಯಲ್ಲಿ ವ್ಯಾಪಾರಿಯೊಬ್ಬರು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಡಿ.17ರಂದು ನಡೆದಿದೆ.

ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ರಾಮಕೃಷ್ಣ ಭಟ್(44) ಎಂದು ಗುರುತಿಸಲಾಗಿದೆ. ಅಡಿಕೆ ವ್ಯವಹಾರ ಮಾಡಿಕೊಂಡಿದ್ದ ಇವರು, ಕಳೆದ 5-6 ತಿಂಗಳಿನಿಂದ ಉಡುಪಿಯ ವಿವಿಧ ಲಾಡ್ಜ್ ಗಳಲ್ಲಿ ಉಳಿದುಕೊಳ್ಳುತ್ತಿದ್ದರು. ಹಲವು ಕಡೆ ಮಾಡಿರುವ ವಿಪರೀತ ಸಾಲವನ್ನು ತೀರಿಸಲಾಗದೆ ಮಾನಸಿಕವಾಗಿ ನೊಂದು ನಗರದ ಕಲ್ಪನಾ ಲಾಡ್ಜ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News