ಉಡುಪಿ: ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

Update: 2024-08-28 14:35 GMT

ಸಾಂದರ್ಭಿಕ ಚಿತ್ರ

ಮಣಿಪಾಲ: ಅಲೆವೂರಿನ ನೈಲ್ಪಾದೆಯ ಚಶ್ಮಾವತಿ ನದಿಯಲ್ಲಿ ಈಜಾಡಲು ಹೋಗಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಕೇರಳದ ತ್ರಿವೆಂಡಮ್‌ನ ಆರೊನ್ ರೋಜರ್ ಲೀನ್(17) ಹಾಗೂ ಕೋಲ್ಕತಾದ ಮಾಧವ್(18) ಎಂದು ಗುರುತಿಸಲಾಗಿದೆ. ಇವರು ಇತರ ಇಬ್ಬರೊಂದಿಗೆ ಸೇರಿ ಆ.25ರಂದು ಈಜಾಡಲು ನೈಲ್ಪಾದೆ ಹೊಳೆಗೆ ಹೋಗಿದ್ದರು.

ಅಲ್ಲಿ ನಾಲ್ವರು ನೀರಿಗೆ ಇಳಿದು ಈಜುತ್ತಿದ್ದು, ಈ ವೇಳೆ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದರೆನ್ನಲಾಗಿದೆ. ಕೂಡಲೇ ಅವರನ್ನು ಸ್ಥಳೀಯರು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆರೋನ್ ಹಾಗೂ ಮಾಧವ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟ ಇಬ್ಬರೂ ಮಣಿಪಾಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News