ವೇಶ್ಯಾವಾಟಿಕೆ: ಮನೆಗೆ ದಾಳಿ ನಡೆಸಿ ಓರ್ವ ಯುವತಿಯ ರಕ್ಷಣೆ
Update: 2025-03-29 22:02 IST
ಉಡುಪಿ: ವೇಶ್ಯಾವಾಟಿಕೆ ಚಟುವಟಿಕೆಗೆ ಸಂಬಂಧಿಸಿ ಉಡುಪಿಯ ಶಾರದ ನಗರದಲ್ಲಿರುವ ಮನೆಯೊಂದಕ್ಕೆ ಮಾ.28ರಂದು ಮಧ್ಯಾಹ್ನ ವೇಳೆ ದಾಳಿ ನಡೆಸಿರುವ ಉಡುಪಿ ಮಹಿಳಾ ಠಾಣೆಯ ಪೊಲೀಸರು ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.
ಸತೀಶ್ ಎಂಬಾತ ಸಂತ್ರಸ್ಥೆಗೆ ಕೆಲಸ ಕೊಡುವುದಾಗಿ ಪುಸಲಾಯಿಸಿ ಮೂಡಬಿದ್ರೆಯಿಂದ ಶಾರದ ನಗರದಲ್ಲಿರುವ ಶ್ರೀಲತಾ ಎಂಬವರ ಮನೆಗೆ ಕಳುಹಿಸಿದ್ದನು. ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆ ಚಟುವಟಿಕೆ ಮಾಡುವಂತೆ ಒತ್ತಾಯ ಮಾಡಿ ರೂಮಿನಲ್ಲಿ ಕೂತುಕೊಂಡು ಇರು ಎಂದು ಒತ್ತಾಯದಿಂದ ಇರಿಸಿಕೊಂಡಿರುವುದಾಗಿ ದೂರಲಾಗಿದೆ. ಈ ಕುರಿತು ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಸಂತ್ರಸ್ಥೆಯನ್ನು ರಕ್ಷಿಸಿದರು. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.