ಉಡುಪಿ: ವಿದ್ಯಾರ್ಥಿಗಳಿಗೆ ವಾರದ ಯಕ್ಷಶಿಕ್ಷಣ ಶಿಬಿರ ಸಮಾರೋಪ

ಉಡುಪಿ: ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ ಒಂದು ವಾರದ ಯಕ್ಷಗಾನ ತರಬೇತಿ ಸನಿವಾಸ ಶಿಬಿರದ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ಜರಗಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭಾಶಂಸನೆಯ ಮಾತುಗಳನ್ನಾಡಿ, ಕೇವಲ ಪಠ್ಯ ಶಿಕ್ಷಣಕ್ಕಷ್ಟೇ ಮಕ್ಕಳನ್ನು ಸೀುತಗೊಳಿಸದೆ ಇಂತಹ ಶಿಬಿರಗಳಲ್ಲಿ ಭಾಗವಹಿಸು ವಂತೆ ಪ್ರೇರೇಪಿಸಿ ಅವರ ಆತ್ಮವಿಶ್ವಾಸ ಹಾಗೂ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವಂತೆ ಪಾಲಕರಿಗೆ ಕರೆಕೊಟ್ಟರು.
ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಮಣೂರು ಇದರ ವರಿಷ್ಠ ಆನಂದ ಸಿ. ಕುಂದರ್, ಯಕ್ಷಗಾನ ಕಲಾರಂಗ ಕಲೆ, ಸಮಾಜಪರ ಕೆಲಸಗಳನ್ನು ಮಾಡುತ್ತಾ ಸಾರ್ವಜನಿಕರ ವಿಶ್ವಾಸವನ್ನು ಗಳಿಸಿದ ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್ನ ಅಧ್ಯಕ್ಷರೂ ಆದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಶುಭಕೋರಿದರು. ಅತಿಥಿಗಳಾಗಿ ಯು.ವಿಶ್ವನಾಥ ಶೆಣೈ, ಡಾ. ಜಗದೀಶ ಶೆಟ್ಟಿ ಸಿದ್ದಾಪುರ, ಜಯ ಸಿ. ಕೋಟ್ಯಾನ್, ಸುಧೀರ್ ಕುಮಾರ್ ಶೆಟ್ಟಿ ಬ್ರಹ್ಮಾವರ, ಡಾ. ಪ್ರಶಾಂತ್ ಶೆಟ್ಟಿ ಮಣಿಪಾಲ, ಶ್ರೀನಿವಾಸ ರಾವ್ ಹಿರಿಯಡಕ, ಶಿಬಿರದ ಪ್ರಾಯೋಜಕತ್ವವಹಿಸಿದ್ದ ಭೀಮ ಗೋಲ್ಡ್ನ ಗುರುಪ್ರಸಾದ್ ಮತ್ತು ರಾಘವೇಂದ್ರ ಭಟ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಿಬಿರದ ನಿರ್ದೇಶಕರಾದ ಗುರು ಬನ್ನಂಜೆ ಸಂಜೀವ ಸುವರ್ಣರನ್ನು ಶಾಲು, ಸ್ಮರಣಿಕೆ ಫಲವಸ್ತು ನೀಡಿ ಸಮ್ಮಾನಿಸಲಾಯಿತು. ಶಿಬಿರದ ಶಿಕ್ಷಕರಾದ ನರಸಿಂಹ ತುಂಗ, ಆದ್ಯತಾ ಭಟ್ ಮತ್ತು ತರಬೇತಿಯಲ್ಲಿ ಸಹಕರಿಸಿದ ಸಂಜೀವ ಸುವರ್ಣರ ಶಿಷ್ಯ ವರ್ಗವನ್ನು ಗೌರವಿಸಲಾಯಿತು.
ಶಿಬಿರದಲ್ಲಿ ನಡೆಸಿದ ಸ್ಪರ್ಧಾ ವಿಜೇತರಿಗೆ ಯು. ಎಸ್. ರಾಜಗೋಪಾಲ ಆಚಾರ್ಯ ಬಹುಮಾನ ವಿತರಿಸಿದರು. ಶಿಬಿರಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ. ಭಟ್, ವಿ.ಜಿ.ಶೆಟ್ಟಿ, ಕೋಶಾಧಿಕಾರಿ ಕೆ. ಸದಾಶಿವ ರಾವ್, ಸದಸ್ಯರಾದ ಸಂತೋಷ್ ಶೆಟ್ಟಿ, ವಿಜಯಕುಮಾರ್ ಮುದ್ರಾಡಿ, ಕೆ. ಆನಂದ ಶೆಟ್ಟಿ ಉಪಸ್ಥಿತರಿದ್ದರು.
ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮಕ್ಕೆ ಮೊದಲು ಶಿಬಿರದಲ್ಲಿ ಪಾಲ್ಗೊಂಡ 60 ವಿದ್ಯಾರ್ಥಿ ಗಳು ಯಕ್ಷಗಾನ ಪ್ರಾತ್ಯಕ್ಷಿಕೆಯನ್ನು ಸುಂದರವಾಗಿ ಪ್ರಸ್ತುತಪಡಿಸಿದರು.