ಉಳ್ಳಾಲ: ಖಾಸಗಿ ಬಸ್ ಚಾಲಕ ಆತ್ಮಹತ್ಯೆ

Update: 2023-12-19 08:12 GMT

‌ಉಳ್ಳಾಲ: ಖಾಸಗಿ ಬಸ್ ಚಾಲಕರೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಸೋಮವಾರ ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಿನ್ಯ ಗ್ರಾಮ ನಿವಾಸಿ ಜಗದೀಶ್ (42) ಎಂದು ಗುರುತಿಸಲಾಗಿದೆ.

ವೃತ್ತಿ ಯಲ್ಲಿ ಚಾಲಕರಾಗಿದ್ದ ಇವರು 43ಎ ರೂಟ್ ನಂಬ್ರದ ಮಂಗಳೂರು- ತಲಪಾಡಿ ರಸ್ತೆಯಾಗಿ ಕಿನ್ಯ ದೇವೀನಗರ ಕಡೆ ಸಂಚರಿಸುವ  ಖಾಸಗಿ ಬಸ್ ನಲ್ಲಿ ದುಡಿಯುತ್ತಿದ್ದರು.

ಸೋಮವಾರ ಮಧ್ಯಾಹ್ನ ವೃತ್ತಿ ಮುಗಿಸಿ ನೇರ ಸೋಮೇಶ್ವರ ತೆರಳಿದ್ದ ಇವರು, ಆರ್ಥಿಕ ಅಡಚಣೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಸಮುದ್ರ ತೀರದಲ್ಲಿ ದೊರೆತಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಜಗದೀಶ್ ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News