ಅಂಕೋಲಾ: ಗುಡ್ಡ ಕುಸಿದು ಮಣ್ಣಿನಡಿಯಲ್ಲಿ ಸಿಲುಕಿದ್ದ 7 ಮಂದಿ ಮೃತ್ಯು

Update: 2024-07-16 09:41 GMT

ಅಂಕೋಲಾ : ಉ.ಕ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ಅಂಕೋಲಾ ತಾಲೂಕಿನ ಶಿರೂರು ಬಳಿ ರಾ.ಹೆ.66 ರಲ್ಲಿ ಭಾರಿ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬ ಐವರು ಸೇರಿದಂತೆ 7 ಮಂದಿ ಮಣ್ಣಿನ ಅಡಿ ಸಿಲುಕಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

 ಮೃತಪಟ್ಟವರನ್ನು ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ(36), ರೋಶನ್ (11), ಅವಾಂತಿಕಾ(6), ಜಗನ್ನಾಥ(55) ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಚತುಷ್ಪತ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಕಂಪನಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ, ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದ್ದು, ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಅಂಚಿನ ಟೀ ಸ್ಟಾಲ್ ಮತ್ತಿತರ ಸಣ್ಣಪುಟ್ಟ ಅಂಗಡಿಗಳು ಸಂಪೂರ್ಣ ಸಂಪೂರ್ಣ ಹಾನಿಯಾಗಿದೆ .  

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News