ಅಂಕೋಲಾ: ಶಿರೂರು ಗುಡ್ಡಕುಸಿತ ಪ್ರಕರಣ; ಮುಳುಗಡೆಯಾಗಿದ್ದ ಲಾರಿ ಪತ್ತೆ?

Update: 2024-09-21 09:07 GMT

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ಗುಡ್ಡಕುಸಿತ ದುರಂತದ ಸಂದರ್ಭದಲ್ಲಿ ಗಂಗಾವಳಿ ನದಿಯಲ್ಲಿ ಮುಳುಗಡೆಯಾದ ಕೇರಳ ಮೂಲದ ಅರ್ಜುನನ ಲಾರಿ ಇರುವಿಕೆಯ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಅವಘಡ ಸಂಭವಿಸಿ ಈಗ ಎರಡು ತಿಂಗಳು ಕಳೆದಿದ್ದು, ಇದೀಗ ಮೂರನೇ ಹಂತದ ಕಾರ್ಯಚರಣೆ ನಡೆಸಲಾಗುತ್ತಿದೆ. ಈ ನಡುವೆ ಇಂದು ಮುಳುಗು ತಜ್ಞ ಈಶ್ವರ ಮಲ್ಪೆ ಸಹ ಶೋಧ ನಡೆಸಿದ್ದಾರೆ. ಈ ವೇಳೆ ನದಿಯಲ್ಲಿ ಲಾರಿ ಇರುವ ಬಗ್ಗೆ ಮುಳುಗು ತಜ್ಞ ಈಶ್ವರ ಮಲ್ಪೆ ಖಚಿತ ಪಡಿಸಿದ್ದು, ಲಾರಿಗೆ ಹಗ್ಗೆ ಕಟ್ಟಿ ಇಡಲಾಗಿದೆ.

ಹೆಚ್ಚಿನ ಶೋಧದ ಬಳಿಕ ಲಾರಿ ಇರುವುದು ಖಚಿತವಾಗಬೇಕಿದೆ.ಲಾರಿಯಲ್ಲಿದ್ದ ಕಟ್ಟಿಗೆ ತುಂಡು ಸಹ ಈಗ ಪತ್ತೆಯಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News