ಭಟ್ಕಳ: ಸೆ.23ರಂದು ಸೀರತ್ ಅಭಿಯಾನ‌ದ ಸಮಾರೋಪ ಸಮಾರಂಭ

Update: 2024-09-20 18:30 GMT

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಸೀರತ್ ಅಭಿಯಾನ-2024 ಸಮಾರೋಪ ಸಮಾರಂಭವು ಸೆ. 23ರ ಸಂಜೆ 5 ಗಂಟೆಗೆ ಭಟ್ಕಳದ ಹೋಟೆಲ್ ರಾಯಲ್ ಓಕ್‌ನಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯದ ವಲಯ ಸಂಚಾಲಕರಾದ ಸಯೀದ್ ಇಸ್ಮಾಯಿಲ್ ವಹಿಸಲಿದ್ದಾರೆ. ಗೌರವ ಅತಿಥಿಯಾಗಿ ಕರಿಕಾಲ್ ಚರ್ಚ್‌ನ ಧರ್ಮಗುರು ಫಾದರ್ ಲೋರೆನ್ಸ್ ಫರ್ನಾಂಡೀಸ್ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಿ. ನ್ಯೂ ಇಂಗ್ಲಿಷ್ ಪಿಯು ಕಾಲೇಜ್ ಪ್ರಾಂಶುಪಾಲ ವೀರೇಂದ್ರ ಶಾನಭಾಗ ಮತ್ತು ಆರ್.ಎನ್.ಎಸ್. ಪಾಲಿಟೆಕ್ನಿಕ್ ಮುರುಡೇಶ್ವರದ ಉಪ ಪ್ರಾಂಶುಪಾಲ ಕೆ. ಮರಿಸ್ವಾಮಿ ಉಪಸ್ಥಿತರಿರಲಿದ್ದಾರೆ.

ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಭಟ್ಕಳ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ನಾಯ್ಕ, ಹಾಗೂ ಸದ್ಭಾನಾ ಮಂಚ್ ಗೌರವಾಧ್ಯಕ್ಷರಾದ ಮೌಲಾನ ಮುನವ್ವರ್ ಪೇಶಮಾಮ್ ಗೌರವ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ರೀತಿಯಲ್ಲಿ ಮೆರಗು ನೀಡಲಿದೆ.

ಭಟ್ಕಳ ತಾಲೂಕಿನ ಗಣ್ಯರು, ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಮ್ಮ ಕುಟುಂಬ ಸಮೇತ ಕಾರ್ಯ ಕ್ರಮದಲ್ಲಿ ಭಾಗವಹಿಸುವಂತೆ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ. ಮನವಿ ಮಾಡಿಕೊಂಡಿದ್ದಾರೆ ಎಂದು ಸೀರತ್ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News