ಕಾರವಾರ: ಪೊಲೀಸ್‌ ಠಾಣೆಯ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಆಸ್ಪತ್ರೆಗೆ ದಾಖಲು

Update: 2024-06-14 09:57 GMT

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಬೆಂಕಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ಶುಕ್ರವಾರ ಸಂಭವಿಸಿದೆ.

ರಾಮನಗರ ಮೂಲದ ಬಾಸ್ಕರ ಬಾಂಡೋಲ್ಕರ ಎಂಬವರು ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ. ಪ್ರಕರಣವೊಂದರಲ್ಲಿ ರಾಮನಗರ ಪಿಎಸ್ಐ ಕಿರುಕುಳದಿಂದ ಬೇಸತ್ತು ತಾನು ಬೆಂಕಿ ಹಾಕಿಕೊಂಡಿರುವುದಾಗಿ ಈ ವ್ಯಕ್ತಿ ವಿಡಿಯೋ ದಲ್ಲಿ ಹೇಳಿಕೊಂಡಿದ್ದಾರೆ.

ಕಳೆದ 5 ತಿಂಗಳ ಹಿಂದೆ ಪ್ರಕರಣವೊಂದರಲ್ಲಿ ರಾಮನಗರ ಪಿಎಸ್‌ಐ 3.50 ಲಕ್ಷ ವಶಕ್ಕೆ ಪಡೆದಿದ್ದರು. ಆದರೆ 30 ಸಾವಿರ ಮಾತ್ರ ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದರು. ಈ ಸಂಬಂಧ ಎಸ್ ಪಿ ಅವರಿಗೆ ದೂರು ನೀಡಿದ್ದೆ. ಆದರೂ ಪ್ರಯೋಜನವಾಗಿಲ್ಲ. ಪಿಎಸ್‌ಐ ನನಗೆ ಸಾಕಷ್ಟು ಕಿರುಕುಳ ನೀಡಿದರು ಎಂದು ಆಂಬುಲೆನ್ಸ್ ನಲ್ಲಿ ತೆರಳುವಾಗ ವ್ಯಕ್ತಿ ವಿಡಿಯೋದಲ್ಲಿ ಹೇಳಿದ್ದಾರೆ.

ವ್ಯಕ್ತಿಯನ್ನು ಬೆಳಗಾವಿ ಆಸ್ಪತ್ರೆಗೆ ಸೇರಿಸಲಾಗಿದ್ದು ಎಸ್.ಪಿ. ವಿಷ್ಣುವರ್ಧನ ಅವರು ರಾಮನಗರ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News