ಶಿರೂರು ಗುಡ್ಡ ಕುಸಿತ ಪ್ರಕರಣ | ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ

Update: 2024-09-25 10:34 GMT

ಕಾರವಾರ : ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.

ಕಳೆದ ಆರು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಂದು(ಸೆ.25) ಅರ್ಜುನ್ ಹಾಗೂ ಅವರ ಲಾರಿಯು ನದಿಯಲ್ಲಿ ಪತ್ತೆಯಾಗಿದೆ. ಈ ಸಂದರ್ಭ ಅರ್ಜುನ್‌ ಅವರ ಮೃತದೇಹ ಲಾರಿಯಲ್ಲೇ ಸಿಕ್ಕಿದೆ ಎಂದು ತಿಳಿದು ಬಂದಿದೆ.

Full View

Full View

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News