ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ಮೃತ್ಯು

Update: 2024-09-23 13:08 GMT

ಯಾದಗಿರಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಮೃತಪಟ್ಟಿರುವಂತಹ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ನಡೆದಿದೆ.

ಮೃತ ವ್ಯಕ್ತಿಗಳನ್ನು ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News