ಯಾದಗಿರಿ | ಕುಡಿಯುವ ನೀರಿಗಾಗಿ ತಾಲೂಕು ಪಂಚಾಯತ್‌ ಮುಂದೆ ರೈತ ಸಂಘದಿಂದ ಪ್ರತಿಭಟನೆ

Update: 2025-03-25 16:24 IST
Photo of Letter of appeal
  • whatsapp icon

ವಡಗೇರಾ : ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕ ಹಾಗೂ ಕೊಳವೆ ಬಾವಿಗಳ ದುರಸ್ತಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ವಾಸುದೇವ್ ಮೇಟಿ ಬಣದ ತಾಲೂಕು ಘಟಕದ ವತಿಯಿಂದ ಮಂಗಳವಾರದಂದು ತಾಲೂಕು ಪಂಚಾಯತ್‌ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕುಬ ಕಟ್ಟಿಮನಿ ಭಾಗವಹಿಸಿ ಮಾತನಾಡಿದರು. ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ ಪಟ್ಟಣದ ವಾರ್ಡ್ 1 ಮತ್ತು 3 ರಲ್ಲಿ ಹಾಗೂ ಇನ್ನಿತರ ಬಡಾವಣೆಗಳಲ್ಲಿ ಸುಮಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ನಮ್ಮ ರೈತ ಸಂಘದ ವತಿಯಿಂದ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ, ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಕೂಡಲೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕಾ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಹಕಾರ ಹೆಚ್ಚಾಗಿದೆ. ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ಮಾಡಿ ತಪ್ಪು ಮಾಹಿತಿ ನಿಡುತ್ತಿರುವುದು ಸರಿಯಲ್ಲ.  ದಿನನಿತ್ಯ ಯುವಕರು ವೃದ್ಧರು ಮಕ್ಕಳು ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯ ಹತ್ತಿರವಿರುವ ಮತ್ತು ಮುಸ್ಲಿಂ ಸಮಾಜದ ಸ್ಮಶಾನದಲ್ಲಿರುವ ಸಮಾಜದ ಸ್ಮಶಾನದಲ್ಲಿರುವ ಬೋರ್ವೆಲ್ ಗಳ ನೀರು ತಂದು ಕುಡಿಯುತ್ತಿದ್ದಾರೆ.  ಹಗಲು ರಾತ್ರಿ ಅನ್ನದೆ ಸೈಕಲ್ ಗಾಡಿಗಳ ಮೇಲೆ ನೀರು ತರುವುದೇ ಒಂದು ಕೆಲಸವಾಗಿದೆ. ಇಷ್ಟೆಲ್ಲ ನೀರಿನ ಸಮಸ್ಯೆ ಇದ್ದರೂ, ಪಿಡಿಓ ಮಾತ್ರ ಇದಕ್ಕೂ ನನಗೂ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕೊಳವೆಬಾವಿ ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳು ಕೇಟ್ಟು ನಿಂತಿದ್ದು ಅವುಗಳ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು.

ಪಟ್ಟಣದಲ್ಲಿ ಕೆಟ್ಟು ನಿಂತಿರುವ ಕೊಳೆಯ ಬಾವಿ ಮತ್ತು ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ದೊರಸ್ತಿಗೊಳಿಸಬೇಕು. ಕಂದಳಿ ಗ್ರಾಮದ ಭೀಮಾ ನದಿಯಿಂದ ಸರಬರಾಜು ಆಗುವ ನೀರು ಸಂಪೂರ್ಣ ಕಲುಷಿತವಾಗಿವೆ,  ಆ ನೀರು ಕುಡಿಯಲು ಯೋಗ್ಯವಿಲ್ಲ. ಅಲ್ಲಿಂದ ಬರುವ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡಬೇಕು. ತುಮಕೂರು ಗ್ರಾಮದ ಕೃಷ್ಣಾ ನದಿಯಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತಿ ಇಓ ಮುಖಾಂತರ ಜಿಲ್ಲಾ ಪಂಚಾಯಿತಿ ಸಿಇಓ ರವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ನಿರತ ಸ್ಥಳಕ್ಕೆ ತಾಲೂಕು ಪಂಚಾಯತ್‌ ಇಓ ಮಲ್ಲಿಕಾರ್ಜುನ ಸಂಗ್ವಾರ ಆಗಮಿಸಿ ಮನವಿ ಸ್ವೀಕರಿಸಿ ಮಾತನಾಡಿ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಯನ್ನು 15 ದಿನದ ಒಳಗಾಗಿ ಬಗೆಹರಿಸುವ ಭರವಸೆ ನೀಡಿದರು.

ಈ ಪ್ರತಿಭಟನೆಯಲ್ಲಿ ತಾಲೂಕು ಗೌರವಾಧ್ಯಕ್ಷ ಶರಣು ಜಡಿ, ಸಾಬಣ್ಣ ತೇಕರಾಳ, ನಾಗರಾಜ ಸ್ವಾಮಿ, ಕೃಷ್ಣಾ, ಸಿದ್ದು, ವೆಂಕಟೇಶ್ ಇಟಗಿ, ವೀರೇಶ್ ಗೌಡ, ಮಲ್ಲಿಕಾರ್ಜುನ್ ವಿಶ್ವಕರ್ಮ, ದೇವಪ್ಪ ಹೊರಟೂರ, ಅಶೋಕ್, ದರ್ಶನ್ ಮುಸ್ತಾಜೀರ, ಬಾಲಪ್ಪ, ಸಾಬಯ್ಯ, ದೇವಪ್ಪ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News