ಉಡುಪಿ : ಲೆಕ್ಕ ಪರಿಶೋಧಕರ ನೇಮಕಕ್ಕೆ ಅರ್ಜಿ ಆಹ್ವಾನ
ಉಡುಪಿ, ಜ.28: ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಅಧಿಸೂಚಿತ ಸಂಸ್ಥೆಗಳ ಸ್ವಾಧೀನದಲ್ಲಿರುವ ಎಲ್ಲ ಲೆಕ್ಕ ಪುಸ್ತಕ, ಓಚರ್ ಇತರ ದಸ್ತಾವೇಜುಗಳು ಮತ್ತು ದಾಖಲೆಗಳ ವಾರ್ಷಿಕ ಲೆಕ್ಕ ಪರಿಶೋಧನೆಗೆ ಜಿಲ್ಲಾ ಮಟ್ಟದಲ್ಲಿ ಲೆಕ್ಕ ಪರಿಶೋಧಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಚಾರ್ಟರ್ಡ್ ಅಕೌಂಟೆಂಟ್ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಗಳು, ನಿಗದಿತ ಅರ್ಜಿಗಳನ್ನು ಭರ್ತಿ ಮಾಡಿ ಫೆ.6ರೊಳಗೆ ಅರ್ಜಿಯನ್ನು ಮೊಹರು ಮಾಡಿದ ಕವರಿನಲ್ಲಿ ಜಿಲ್ಲಾಧಿಕಾರಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ ಉಡುಪಿ ಜಿಲ್ಲೆ ರಜತಾದ್ರಿ ಮಣಿಪಾಲ ಇವರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
Next Story