ಕೆ ವೈ ಯೂಸುಫ್ ಹಾಜಿ ಕೆಮ್ಮಾರ
ಉಪ್ಪಿನಂಗಡಿ, ಮಾ.2: ಹಿರೆಬಂಡಾಡಿ ಗ್ರಾಮದ ಕೆಮ್ಮಾರ ಪಟ್ಟೆ ನಿವಾಸಿ, ಪಿಎಫ್ ಐ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಝಾಕ್ ಕೆಮ್ಮಾರ ಅವರ ತಂದೆ ಕೆ ವೈ ಯೂಸುಫ್ ಹಾಜಿ ಕೆಮ್ಮಾರ (75) ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು.
ಮೃತರು ಏಳು ಮಂದಿ ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸುಮಾರು ಇಪ್ಪತ್ತು ವರ್ಷ ಗಂಡಿಬಾಗಿಲು ಜುಮಾ ಮಸೀದಿಯ ಅಧ್ಯಕ್ಷರಾಗಿದ್ದರು. ಕೆಮ್ಮಾರ ಜುಮಾ ಮಸೀದಿಯ ಮಾಜಿ ಉಪಾಧ್ಯಕ್ಷರಾಗಿ, ಉಪ್ಪಿನಂಗಡಿ ಕೇಂದ್ರ ಜುಮಾ ಮಸೀದಿಯ ಸದಸ್ಯರಾಗಿ ಹಲವಾರು ಧಾರ್ಮಿಕ, ಸಾಮಾಜಿಕ ಸೇವೆ ಸಲ್ಲಿಸಿದ್ದರು.
Next Story