ಆಮಿನಾ
ಪುತ್ತೂರು, ಎ.14: ಪುತ್ತೂರು ತಾಲೂಕಿನ ಸಂಪ್ಯದ ಕಮ್ಮಾಡಿ ನಿವಾಸಿ ಉದ್ಯಮಿ ಹಾಗೂ ಪುತ್ತೂರು ತಾಲೂಕು ಮುಸ್ಲಿಮ್ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಎಸ್. ಇಬ್ರಾಹೀಂ ಕಮ್ಮಾಡಿಯವರ ಪತ್ನಿ ಆಮಿನಾ (64) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ಸಂಜೆ ನಿಧನರಾದರು.
ಮೃತರ ಮನೆಗೆ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ಮೂಡಿಗೆರೆ ಖಾಝಿ ಎಂ.ಎ. ಖಾಸಿಂ ಮುಸ್ಲಿಯಾರ್, ಬೇಕಲ್ ಖಾಝಿ, ಅಬ್ದುಲ್ ಹಮೀದ್ ಮುಸ್ಲಿಯಾರ್ ಮಚ್ಚಂಪಾಡಿ ಮಾಣಿ, ಪುತ್ತೂರು ಕೇಂದ್ರ ಜುಮ್ಮಾ ಮಸೀದಿ ಮುದ್ರಿಸ್ ಅಸೈಯ್ಯದ್ ಅಹ್ಮದ್ ಪೂಕೋಯ ತಂಙಳ್, ಅಸೈಯದ್ ಹಾದೀ ತಂಙಳ್ ಮಂಜೇಶ್ವರ, ಪುತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಎಸ್.ಬಿ. ಮುಹಮ್ಮದ್ ದಾರಿಮಿ, ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ, ಜಿಪಂ ಸದಸ್ಯರಾದ ಎಂ.ಎಸ್.ಮುಹಮ್ಮದ್, ಅನಿತಾ ಹೇಮನಾಥ ಶೆಟ್ಟಿ. ಹಾಜಿ ಮುಸ್ತಫಾ ಕೆಂಪಿ ಸೇರಿದಂತೆ ಹಲವಾರು ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಅಂತ್ಯವಿಧಿಯನ್ನು ಗುರುವಾರ ರಾತ್ರಿ ಸಂಪ್ಯ ಕಮ್ಮಾಡಿ ಮಸೀದಿ ವಠಾರದಲ್ಲಿ ನಡೆಸಲಾಯಿತು.
ಎ.ಪಿ. ಅಬೂಬಕರ್ ಮುಸ್ಲಿಯಾರ್ ನೇತೃತ್ವದಲ್ಲಿ ಮಯ್ಯತ್ ನಮಾಝ್ ನಿರ್ವಹಿಸಲಾಯಿತು. ಮೃತರು ಪತಿ ಹಾಜಿ ಇಬ್ರಾಹೀಂ ಕಮ್ಮಾಡಿ, ಪುತ್ರ ಡಾ.ಅಶ್ರಫ್ ಕಮ್ಮಾಡಿ, ಪುತ್ರಿ ಅಫ್ಸಾಬಿ ಹಾಗೂ ಅಳಿಯ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝಲ್ ರಹೀಂ ಮತ್ತು ಬಂಧುಗಳನ್ನು ಅಗಲಿದ್ದಾರೆ.