ಮೂಡುಬಿದಿರೆ: ಭಂಡಾರಿ ಸಮಾಜ ಸೇವಾ ಸಂಘದಿಂದ ಸನ್ಮಾನ
ಮೂಡುಬಿದಿರೆ, ಜೂ.26: ಭಂಡಾರಿ ಸಮಾಜ ಸೇವಾ ಸಂಘ ಮೂಡುಬಿದಿರೆ ವಲಯದ 6ನೆ ವರ್ಷದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ರವಿವಾರ ಸಮಾಜ ಮಂದಿರದಲ್ಲಿ ನಡೆಯಿತು. ಕಚ್ಚೂರು ನಾಗೇಶ್ವರ ದೇವಸ್ಥಾನ ಮತ್ತು ಸೇವಾ ಟ್ರಸ್ಟ್ನ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ ಕಾರ್ಯಕ್ರಮ ಉದ್ಘಾಟಿಸಿದರು.
ಮೂಡುಬಿದಿರೆ ಭಂಡಾರಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಾಧವ ಭಂಡಾರಿ ಕಾನ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಚ್ಚೂರು ನಾಗೇಶ್ವರ ದೇವಸ್ಥಾನ ಮತ್ತು ಸೇವಾ ಟ್ರಸ್ಟ್ನ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ, ಭಂಡಾರಿ ಮಹಾಮಂಡಲದ ಅಧ್ಯಕ್ಷ ಸದಾಶಿವ ಭಂಡಾರಿ, ಪುಸ್ತಕದ ಪಾಯೋಜಕಿ, ಭಂಡಾರಿ ಸಮಾಜ ಸೇವಾ ಸಂಘ ಮೂಡುಬಿದಿರೆಯ ಗೌರವಾಧ್ಯಕ್ಷೆ ವಸಂತಿ ಜಯ ಭಂಡಾರಿ, ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿರುವ ಶೃತಿಕಾ, ಶರಣಿಕ್ , ವರುಣ್ ವೈ. ಭಂಡಾರಿಯವರನ್ನು ಸನ್ಮಾನಿಸಲಾಯಿತು. ಪುರಸಬಾ ಸದಸ್ಯ ಪ್ರಸಾದ್ ಕುಮಾರ್, ಭಂಡಾರಿ ಮಹಾ ಮಂಡಲದ ಪ್ರಧಾನ ಕಾರ್ಯದರ್ಶಿ ಯು.ಸತೀಶ್ ಭಂಡಾರಿ, ಬೆಂಗಳೂರು ಭಂಡಾರಿ ಸಂಘದ ಅಧ್ಯಕ್ಷ ಸುಧಾಕರ ಬನ್ನಂಜೆ, ಚಲನಚಿತ್ರ ನಟ ಶೇಖರ ಕಾರ್ಕಳ, ಮೂಡುಬಿದಿರೆ ಸಂಘದ ಸ್ಥಾಪಕಾಧ್ಯಕ್ಷ ಎಂ.ಆರ್.ಭಂಡಾರಿ, ಕಚ್ಚೂರು ನಾಗೇಶ್ವರ ದೇವಸ್ಥಾನ ಮತ್ತು ಸೇವಾ ಟ್ರಸ್ಟ್ನ ಟ್ರಸ್ಟಿ ಪ್ರಶಾಂತ್ ಭಂಡಾರಿ ಪುತ್ತಿಗೆ, ಉದ್ಯಮಿ ಕೆ.ಎನ್.ಪ್ರಕಾಶ್ ಭಂಡಾರಿ ಅತಿಥಿಗಳಾಗಿದ್ದರು.
ಪ್ರಧಾನ ಕಾರ್ಯದರ್ಶಿ ಸತೀಶ್ ಭಂಡಾರಿ ಕರಿಂಜೆ ಸ್ವಾಗತಿಸಿದರು. ಅಶೋಕ್ ಭಂಡಾರಿ ಅಲಂಗಾರು ವಂದಿಸಿದರು.