ಉಪ್ಪುಂದ: ದೋಣಿಯಿಂದ ಬಿದ್ದು ಮೀನುಗಾರ ಮೃತ್ಯು
ಬೈಂದೂರು, ಜು.14: ಉಪ್ಪುಂದ ಗ್ರಾಮದ ನದಿಕಂಠ ಹೊಳೆಯಲ್ಲಿ ದೋಣಿಯಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರರೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.13ರಂದು ರಾತ್ರಿ 8ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಉಪ್ಪುಂದ ಗ್ರಾಮದ ಸೋಮ ಖಾರ್ವಿ(45) ಎಂದು ಗುರುತಿಸಲಾಗಿದೆ.
ಇವರು ಮೀನು ಹಿಡಿಯಲು ಪಾತಿ ದೋಣಿಯಲ್ಲಿ ಹೋಗಿದ್ದು ನದಿಯಲ್ಲಿ ಬಲೆಯನ್ನು ಹಾಕುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯ ನೀರಿಗೆ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story