ಆತೂರು: ಬೃಹತ್ ಮರ ಉರುಳಿ ವಿದ್ಯುತ್ ಕಂಬಗಳಿಗೆ ಹಾನಿ
ಕಡಬ, ಜು.15. ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬದಿಯಲ್ಲಿನ ಭಾರೀ ಗಾತ್ರದ ಹಾಲುಮಡ್ಡಿ ಮರವೊಂದು ಮುರಿದು ವಿದ್ಯುತ್ ಲೈನ್ಗೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಗುರುವಾರ ತಡರಾತ್ರಿ ಉಂಟಾಗಿದೆ.
ಮರ ಬುಡಸಮೇತ ಗುರುವಾರ ರಾತ್ರಿ ಮೂರು ಗಂಟೆಯ ವೇಳೆಗೆ ಮುರಿದು ಬಿದ್ದಿದೆ. ವಿದ್ಯುತ್ ಲೈನ್ ಮೇಲೆ ಬಿದ್ದಿರುವುದರಿಂದ ಮೂರು ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಶನಿವಾರ ಸಂಜೆ ತನಕ ಈ ಬಾಗದ ಜನರಿಗೆ ವಿದ್ಯುತ್ ಸಂಪರ್ಕ ಕಡಿದು ಹೋಗಿತ್ತು. ವಿದ್ಯುತ್ ಕಂಬ ಮುರಿತದಿಂದಾಗಿ ಇಲಾಖೆಗೆ ಸುಮಾರು ಒಂದು ಲಕ್ಷ ರೂ.ನಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಉಪ್ಪಿನಂಗಡಿ ಮೆಸ್ಕಾಂ ಅಭಿಯಂತರ ಸುಂದರ್ರ ನೇತೃತ್ವದಲ್ಲಿ ಬೆಳಗ್ಗೆಯಿಂದ ಸಂಜೆಯ ತನಕ ದುರಸ್ತಿ ಕಾರ್ಯಗಳನ್ನು ಮಾಡಲಾಗಿತ್ತು. ಮರ ಬಿದ್ದಿರುವುದರಿಂದ ಕಳೆದ ರಾತ್ರಿಯಿಂದ ಶುಕ್ರವಾರ ಸಂಜೆಯ ತನಕ ಕೊಲ, ರಾಮಕುಂಜ, ಹಳೆನೇರೆಂಕಿ ಗ್ರಾಮದ ಸಾವಿರಕ್ಕೂ ಅಧಿಕ ಮನೆಗಳಿಗೆ ಹಾಗೂ ಸರಕಾರಿ, ಖಾಸಗಿ ಕಚೇರಿಗಳಲ್ಲಿ ವಿದ್ಯುತ್ ಇಲ್ಲದೆ ಪರದಾಡುವಂತಾಯಿತು.