ಕುಲಾಲ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ
ಬಂಟ್ವಾಳ, ಜು. 20: ತಾಲೂಕು ಕುಲಾಲ ಸುಧಾರಕ ಸಂಘ ಮಯ್ಯರಬೈಲು ವತಿಯಿಂದ ಪ್ರಥಮ ಪಿಯುಸಿ ವ್ಯಾಸಂಗ ಮಾಡುವ, ಆಯ್ಕೆ ಮಾಡಲ್ಪಟ್ಟ ಸ್ವಜಾತಿಯ ವಿದ್ಯಾರ್ಥಿಗಳಿಗೆ ಪಿಯುಸಿ, ಪದವಿ ಹಾಗೂ ಡಿಪ್ಲೋಮ ವ್ಯಾಸಂಗದ ಕೊನೆಯ ವರ್ಷದವರೆಗೆ ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸ್ತವ್ಯವಿದ್ದು, ಬಡಕುಟುಂಬದ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70ಕ್ಕಿಂತ ಅಧಿಕ ಅಂಕ ಪಡೆದಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯ ಅಂಕಪಟ್ಟಿಯ ಪ್ರತಿ, ಪ್ರಸ್ತುತ ವ್ಯಾಸಂಗ ಸಂಸ್ಥೆಯ ವ್ಯಾಸಂಗ ಪ್ರಮಾಣಪತ್ರ, ಆದಾಯ ಪ್ರಮಾಣ ಪತ್ರದ ಪ್ರತಿ, ಪಡಿತರ ಚೀಟಿಯ ಪ್ರತಿ, ಭಾವಚಿತ್ರ, ದೂರವಾಣಿ ಸಂಖ್ಯೆ ಹಾಗೂ ಹೆತ್ತವರ ಸಹಿಯೊಂದಿಗೆ ಜುಲೈ 31ರೊಳಗೆ ಸಂಘದ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.
2016ರ ವಾರ್ಷಿಕ ಪರೀಕ್ಷೆಯಲ್ಲಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳ ಹೆತ್ತವರು ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸ್ತವ್ಯ ಹೊಂದಿರುವ ಸ್ವಜಾತಿಯ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿದ್ಯಾರ್ಥಿಗಳು ಅಂಕಪಟ್ಟಿ, ಭಾವಚಿತ್ರ ಹಾಗೂ ಹೆತ್ತವರ ಸಹಿಯೊಂದಿಗೆ ಜುಲೈ 31ರೊಳಗೆ ಸಂಘದ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.