ಐವನ್ ಡಿಸೋಜರಿಂದ ಅಲ್ಪಸಂಖ್ಯಾತರ ಭವನದ ಕಾಮಗಾರಿ ವೀಕ್ಷಣೆ
ಮಂಗಳೂರು, ಆ. 9: ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿಸೋಜ ಪಾಂಡೇಶ್ವರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಅಲ್ಪಸಂಖ್ಯಾತರ ಭವನದ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ವೀಕ್ಷೀಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ರೀತಿಯಲ್ಲಿ ಸರಕಾರದ ಎಲ್ಲಾ ಸವಲತ್ತುಗಳು ಒಂದೇ ಸೂರಿನಡಿ ದೊರಕಬೇಕೆಂಬುದು ಮುಖ್ಯಮಂತ್ರಿಯವರ ಆಶಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಮೂಡ ಚೇರ್ಮೆನ್ ಇಬ್ರಾಹೀಂ ಕೋಡಿಜಾಲ್, ವಕ್ಫ್ ಅಧಿಕಾರಿ ಅಬೂಬಕರ್, ಅಧಿಕಾರಿ ಉಸ್ಮಾನ್, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.
Next Story