ಹೃದಯಾಘಾತದಿಂದ ಸಿಆರ್ಡಿಎ ಹೆಡ್ಕಾನ್ಸ್ಟೇಬಲ್ ಮೃತ್ಯು
ಮಂಗಳೂರು, ಆ.18: ವಾಹನ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ನಾಗರಿಕ ಜಾರಿ ಹಕ್ಕು ನಿರ್ದೇಶನಾಲಯ ಇಲಾಖೆಯ ಹೆಡ್ಕಾನ್ಸ್ಟೇಬಲ್ ಓರ್ವರು ಮೃತಪಟ್ಟ ಘಟನೆ ಮಂಗಳೂರಿನ ಪಿವಿಎಸ್ ಬಳಿ ಸಂಭವಿಸಿದೆ.
ಮೃತರನ್ನು ರತ್ನಾಕರ್ (56) ಎಂದು ಗುರುತಿಸಲಾಗಿದೆ.
ಕರ್ತವ್ಯ ನಿಮಿತ್ತ ವಾಹನದಲ್ಲಿ ತೆರಳುತ್ತಿದ್ದ ವೇಳೆ ಪಿವಿಎಸ್ ಸಮೀಪಿಸುತ್ತಿದ್ದಂತೆ ರತ್ನಾಕರ್ರಿಗೆ ಹೃದಯಾಘಾತವಾಗಿದೆ. ಕೂಡಲೇ ಇವರು ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಕೂಡಲೇ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Next Story