ಕಣ್ಣೂರು: ನಾಡಬಾಂಬ್ ಸ್ಫೋಟಗೊಂಡು ಬಿಜೆಪಿ ಕಾರ್ಯಕರ್ತ ಮೃತ್ಯು
ಕಾಸರಗೋಡು, ಆ.20: ನಾಡ ಬಾಂಬ್ ಸ್ಫೋಟಗೊಂಡು ಬಿಜೆಪಿ ಕಾರ್ಯಕರ್ತ ಮೃತಪಟ್ಟ ದಾರುಣ ಘಟನೆ ಶನಿವಾರ ರಾತ್ರಿ ಕಣ್ಣೂರು ಕೂತುಪರಂಬ ಸಮೀಪದ ಕೋಟಪಾಯಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೋಟಪಾಯಲ್ನ ದೀಕ್ಷಿತ್ (26) ಎಂದು ಗುರುತಿಸಲಾಗಿದೆ.
ದೀಕ್ಷಿತ್ನ ಮನೆಯಲ್ಲಿ ಈ ಘಟನೆ ನಡೆದಿದ್ದು, ನಾಡ ಬಾಂಬ್ ತಯಾರಿ ವೇಳೆ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಧ್ವಂಸಗೊಂಡಿದೆ. ಸ್ಫೋಟ ಸಂಭವಿಸುವ ಸಂದರ್ಭದಲ್ಲಿ ದೀಕ್ಷಿತ್ ಮಾತ್ರ ಮನೆಯಲ್ಲಿದ್ದ ಎಂದು ತಿಳಿದುಬಂದಿದೆ. ಮೃತದೇಹವನ್ನು ತಲಶ್ಶೇರಿ ಸಹಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಕದಿರೂರು ಪೊಲೀಸರು ಸ್ಥಳಕ್ಕಾಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Next Story