ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾಗಿ ವಿಜಯ ವಿಕ್ರಮ
ಉಪ್ಪಿನಂಗಡಿ, ಆ.24: ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾಗಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ವಿಜಯ ವಿಕ್ರಮರನ್ನು ನಿಯೋಜಿಸಲು ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕಳೆದ 4 ವರ್ಷಗಳಿಂದ ಉಪ್ಪಿನಂಗಡಿ ಹೋಬಳಿ ಕಂದಾಯ ನಿರೀಕ್ಷಕರಾಗಿದ್ದ ಮಂಜುನಾಥ್ರನ್ನು ಪುತ್ತೂರು ತಾಲೂಕು ಕಚೇರಿಗೆ ಪ್ರಥಮ ದರ್ಜೆ ಸಹಾಯಕರಾಗಿ ನಿಯೋಜಿಸಲಾಗಿದೆ.
Next Story