ಆರೋಗ್ಯ ಮಾಹಿತಿ ಕಾರ್ಯಕ್ರಮ
ಕಾರ್ಕಳ, ಆ.25: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಗುರುವಾರ ನಡೆಯಿತು. ಎನ್ನೆಸ್ಸೆಸ್ ಘಟಕ, ಯುವ ರೆಡ್ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕು ವೈದ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಉದ್ಘಾಟಿಸಿದರು. ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು ಮತ್ತು ನಿವಾರಣೆಯ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಶ್ರೀ ವರ್ಮ ಅಜ್ರಿ ಎಂ. ಮಾತನಾಡಿದರು.
ವಾಣಿಜ್ಯ ವಿಭಾಗದ ಜ್ಯೋತಿ ಎಲ್. ಜನ್ನೆ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಮೂರ್ತಿ ವೈದ್ಯ, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ವೆಂಕಟೇಶ್ ಉಪಸ್ಥಿತರಿದ್ದರು.
ರಾ.ಸೇ.ಯೋ. ಅಧಿಕಾರಿ ಗೌರಿ ಎಸ್. ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ವಿಜೇತಾ ಕಾರ್ಯಕ್ರಮ ನಿರೂಪಿಸಿದರು. ಎನ್ನೆಸ್ಸೆಸ್ ಘಟಕದ ಕಾರ್ಯದರ್ಶಿ ಭರತ್ ವಂದಿಸಿದರು.
Next Story