ಮನಪಾದಿಂದ ‘ಟೈಗರ್’ ಕಾರ್ಯಾಚರಣೆ ಆರಂಭ
ಮಂಗಳೂರು, ಸೆ.3: ಮಂಗಳೂರು ಮಹಾನಗರ ಪಾಲಿಕೆಯು ನಗರದಲ್ಲಿ ಮತ್ತೆ ಟೈಗರ್ ಕಾರ್ಯಾಚರಣೆ ಆರಂಭಿಸಿದ್ದು, ಕುಂಟಿಕಾನ ಫ್ಲೈ ಓವರ್ ಕೆಳಗಡೆ ಕಾರ್ಯಾಚರಿಸುತ್ತಿದ್ದ ಗೂಡಂಗಡಿಗಳನ್ನು ಇಂದು ಬೆಳಗ್ಗೆ ತೆರವುಗೊಳಿಸಿತು.
ಕಂದಾಯ ಅಧಿಕಾರಿ ಪ್ರವೀಣ್, ಮನಪಾ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ ಹಾಗೂ ಇತ ಮನಪಾ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮನಪಾ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಪಾದಚಾರಿಗಳಿಗೆ ತೊಂದರೆ ಆಗುವ ರೀತಿಯಲ್ಲಿ ಅನ ಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಬೀದಿಬದಿ ವ್ಯಾಪಾರ ಹಾಗೂ ಗೂಡಂಗಡಿಗಳನ್ನು ತೆರವುಗೊಳಿಸುವ ಟೈಗರ್ ಕಾರ್ಯಾಚರಣೆಗೆ ಮಂಗಳವಾರ ಮನಪಾದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಇದೀಗ ಕಾರ್ಯಾಚರಣೆ ಆರಂಭಗೊಂಡಿದೆ.
Next Story