ನಾಳೆ ಅಲ್ಹಖ್ ಫೌಂಡೇಶನ್ನಿಂದ ರಕ್ತದಾನ ಶಿಬಿರ
ಮಂಗಳೂರು, ಅ.14: ನಗರದ ಅಲ್ ಹಖ್ ಫೌಂಡೇಶನ್ ವತಿಯಿಂದ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಅ.16ರಂದು ಬೆಳಗ್ಗೆ 9 ಗಂಟೆಗೆ ನಗರದ ಸ್ಟೇಟ್ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯ ದಾರುಲ್ ಖೈರ್ನಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆಯ ಡಾ. ಅಪೂರ್ವ, ಬಂದರ್ ಠಾಣಾ ನಿರೀಕ್ಷಕ ಶಾಂತರಾಮ್, ಕಾರ್ಪೊರೇಟರ್ ಅಬ್ದುಲ್ಲತೀಫ್, ಎಸ್ಕೆಎಸ್ಎಂ ಪ್ರಧಾನ ಕಾರ್ಯದರ್ಶಿ ಬಶೀರ್ ಅಹ್ಮದ್ ಶಾಲಿಮರ್, ಮುಖಂಡರಾದ ಅಹ್ಮದ್ ಅನ್ಸಾರ್, ಅಬ್ದುರ್ರಹ್ಮಾನ್ ಬಾಷಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಬಿ.ಎಸ್.ಇಮ್ತಿಯಾಝ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story