ಮಹ್ಮೂದ್ ಸಅದ್
ಮಂಗಳೂರು, ನ. 16: ಕುದ್ರೋಳಿ ಜಾಮಿಯಾ ಮಸೀದಿ ಬಳಿಯ ನಿವಾಸಿ ಮಹ್ಮೂದ್ ಸಅದ್ (61) ಇಂದು ಬೆಳಗ್ಗೆ ನಿಧನ ಹೊಂದಿದರು.
ಅವರು ಪತ್ನಿ ಮೂವರು ಪುತ್ರರು, ಇಬ್ಬರು ಪುತ್ರಿಯರು ಸಹಿತ ಬಂಧು, ಬಳಗವನ್ನು ಅಗಲಿದ್ದಾರೆ. ಕಳೆದ ಸುಮಾರು 35 ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕೋಬರ್ನಲ್ಲಿ ಉದ್ಯೋಗದಲ್ಲಿದ್ದ ಅವರು, ಜ್ವರ ಕಾಣಿಸಿಕೊಂಡಿದ್ದರಿಂದ ಐದು ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದರು. ಜ್ವರ ಉಲ್ಬಣಗೊಂಡ ಪರಿಣಾಮ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ತೊಂದರೆಯೂ ಇದ್ದುದರಿಂದ ಐದು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬ ಮೂಲ ತಿಳಿಸಿದೆ.
ಮಂಗಳವಾರ ಇಶಾ ನಮಾಝಿನ ಬಳಿಕ ಕುದ್ರೋಳಿಯ ನಡುಪಳ್ಳಿಯಲ್ಲಿ ಮಯ್ಯಿತ್ ನಮಾಝ್ ನೆರವೇರಿಸಲಾಯಿತು.
Next Story