ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಗಂಗೊಳ್ಳಿ, ನ.18: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಯಕವಾಡಿ ನಿವಾಸಿ ನಿತ್ಯಾನಂದ(42) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.15ರಂದು ರಾತ್ರಿ ವೇಳೆ ಚಕ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹವು ನ.16ರಂದು ಬೆಳಗ್ಗೆ ಹಕ್ಲಾಡಿ ಗ್ರಾಮದ ಕೆಳಾಕಳಿ ಎಂಬಲ್ಲಿ ಹೊಳೆಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಬಾರಕೂರು ಕಚ್ಚೂರು ಗ್ರಾಮದ ಮಹೇಶ್(30) ಎಂಬ ವರು ನ.17ರಂದು ರಾತ್ರಿ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story