ಆರೋಗ್ಯಕರ ಜೀವನಶೈಲಿಗೆ ಯೋಗ ಸಹಕಾರಿ : ಸುದೇಶ್ ಶಾಸ್ತ್ರಿ
ಮಂಗಳೂರು, ಡಿ.21: ಬದಲಾದ ಜೀವನಶೈಲಿಯಲ್ಲಿ ಮನುಷ್ಯ ತನ್ನ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಲು ವ್ಯಾಯಾಮದಂತೆ ಯೋಗವೂ ಒಂದು. ದೇಹದ ಮೂಳೆ ಸ್ನಾಯುಗಳನ್ನು ಚುರುಕು ಮತ್ತು ಚಟುವಟಿಕೆಗೊಳಿಸಲು ಯೋಗ ಸಹಕಾರಿಯಾಗಿದೆ. ನಿರಂತರ ಯೋಗಭ್ಯಾಸವು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಎಂದು ಶರವು ಶ್ರೀಮಹಾಗಣಪತಿ ದೇವಸ್ಥಾನದ ಸುದೇಶ್ ಶಾಸ್ತ್ರಿ ಹೇಳಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ.ಜಿಲ್ಲಾ ಶಾಖೆ ಹಾಗೂ ಪತಂಜಲಿ ಯೋಗಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟ್ ಮಂಗಳೂರು ಇದರ ಸಹಯೋಗದೊಂದಿಗೆ ನಡೆಯುವ 30 ದಿನಗಳ ಉಚಿತ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಪತ್ರಕರ್ತ ಸುರೇಂದ್ರ ಎಸ್.ವಾಗ್ಲೆ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ಷಾ, ವಿಶ್ವಾಸ್ ದಾಸ್, ಮಹೇಶ್ ನಾಯಕ್, ಪ್ರಕಾಶ್ ನಾಯಕ್, ಸಂಘದ ಮುಖಂಡರಾದ ಡಾಲ್ಫಿ ಸಿಕ್ವೇರಾ, ಪಿ.ಕೆ.ಕೃಷ್ಣ, ಯೋಗ ಗುರು ಎಂ.ಜಗದೀಶ್, ಬಿಜೈ, ಅಕ್ಷಯ್ ಮತ್ತಿತರರು ಉಪಸ್ಥಿತರಿದ್ದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.