ಪಕೀರ ಎಂ
ಪು್ತೂರು, ಫೆ.2: ತಾಲೂಕಿನ ಕೆಯ್ಯೂರು ನಿವಾಸಿ ದಿ.ಕಾಳಮುಗೇರ ಅವರ ಪುತ್ರ ಬಿಜೆಪಿ ಮುಖಂಡ ಮಾಜಿ ಜಿಪಂ ಸದಸ್ಯ ಪಕೀರ.ಎಂ(46)ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸುಳ್ಯ ಶಾಸಕ ಅಂಗಾರ ಸೇರಿದಂತೆ ಅನೇಕ ಗಣ್ಯರು ಭೆೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.
Next Story