ಲಕ್ಷ್ಮೀನಾರಾಯಣ ಸಾಲ್ಯಾನ್
ಮುಲ್ಕಿ, ೆ.12: ಇಲ್ಲಿನ ಭಾರತ್ ಬ್ಯಾಂಕ್ನ ಬ್ರಾಂಚ್ಮ್ಯಾನೇಜರ್ ಲಕ್ಷ್ಮೀನಾರಾಯಣ ಸಿ. ಸಾಲ್ಯಾನ್(43) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹೆಜಮಾಡಿಯ ಸುಪ್ರಸಿದ್ಧ ಜಾರಂದಾಯ ದೈವಪಾತ್ರಿ ದಿ.ಚೆನ್ನಪ್ಪ ಪೂಜಾರಿಯವರ ಪುತ್ರ ಹಾಗೂ ಹೆಜಮಾಡಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾಗಿದ್ದ ಇವರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Next Story