ನಿಧನ: ಹಾಜಿ ಬಿ.ಕುಂಞಿ ಅಬ್ದುಲ್ ಖಾದರ್
ನಿಧನ: ಹಾಜಿ ಕುಂಞಿ ಅಬ್ದುಲ್ ಖಾದರ್
ಬಂಟ್ವಾಳ, ಮಾ.20: ಇಲ್ಲಿನ ಬಾಂಬಿಲ ನಿವಾಸಿ ಹಾಜಿ ಕುಂಞಿ ಅಬ್ದುಲ್ ಖಾದರ್ (82) ಸೋಮವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಐವರು ಮಕ್ಕಳು ಹಾಗು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಇವರು ಮಾಜಿ ಗ್ರಾಪಂ ಸದಸ್ಯರಾಗಿ, ಅಕ್ರಮ-ಸಕ್ರಮ ಬಂಟ್ವಾಳ ಸಮಿತಿಯ ಅಧ್ಯಕ್ಷರಾಗಿ, ಕಾವಳಪಡೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಬಾಂಬಿಲ ಮಸೀದಿಯ ಅಧ್ಯಕ್ಷರಾಗಿ, ಅಜಿಲಮೊಗರು ದರ್ಗಾ ಸಮಿತಿಯ ಸದಸ್ಯರಾಗಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ, ಕೃಷಿಕರಾಗಿ ಮತ್ತು ಸಮಾಜ ಸೇವಕರಾಗಿ ಸೇವೆ ಸಲ್ಲಿಸಿದ್ದರು.
ಸಂತಾಪ:
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ರಾಜ್ಯ ಗೇರು ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್, ದ.ಕ.ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಜಿಪಂ ಸದಸ್ಯರಾದ ಪದ್ಮಶೇಖರ್ ಜೈನ್, ಎಂ.ಎಸ್. ಮಹಮ್ಮದ್, ತುಂಬೆ ಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಕೆಪಿಸಿಸಿ ಸದಸ್ಯರಾದ ಹಾಜಿ ಯು.ಕೆ. ಮೋನು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಮಾಯಿಲಪ್ಪಸಾಲ್ಯಾನ್, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರಿಯಾಝ್ ಬಂಟ್ವಾಳ ಸಂತಾಪ ಸೂಚಿಸಿದ್ದಾರೆ.