ಮಾಜಿ ಶಾಸಕ ಪಳ್ಳಿಪುರಂ ಬಾಲನ್ ನಿಧನ
ಕಾಸರಗೋಡು, ಎ.30: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಳ್ಳಿಪುರಂ ಬಾಲನ್ ( ೭೮) ಶನಿವಾರ ತಡರಾತ್ರಿ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವತು ಸಿಪಿಐ ರಾಜ್ಯ ಸಮಿತಿ ಸದಸ್ಯರಾಗಿದ್ದರು.2006ರಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು.
1939ರ ಅಕ್ಟೊಂಬರ್ 10ರಂದು ಕಣ್ಣೂರಿನ ಪಳ್ಳಿಪುರದಲ್ಲಿ ಜನಿಸಿದ್ದ ಬಾಲನ್ ಶಾಲಾ ದಿನಗಳಿಂದಲೇ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಯುವ ಸಂಘಟನೆಯಾದ ಎಐವೈಎಫ್ ನ ಕಣ್ಣೂರು ಜಿಲ್ಲಾ ಕಾರ್ಯದರ್ಶಿ, ತಾಲೂಕು ಕಾರ್ಯದರ್ಶಿ, ಸಿಪಿಐ ಜಿಲ್ಲಾ ಸಹ ಕಾರ್ಯದರ್ಶ , ರಾಜ್ಯ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ಪರಿಶಿಷ್ಟ ಜಾತಿ, ಪಂಗಡ ಅಭಿವೃದ್ಧಿ ನಿಗಮ ಅಧ್ಯಕ್ಷ, ಕೇರಳ ಆದಿವಾಸಿ ಯೂನಿಯನ್ ರಾಜ್ಯ ಕಾರ್ಯದರ್ಶಿ , ಕಣ್ಣೂರು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇಂದು ಬಳಿಕ ಮಧ್ಯಾಹ್ನ ಎರಡು ಗಂಟೆಗೆ ಕಣ್ಣೂರು ಸಿಪಿಐ ಜಿಲ್ಲಾ ಕಚೇರಿಯಲ್ಲಿ ಅಂತಿಮ ದರ್ಶನಕ್ಕಿಡಲಾಗುವುದು. ಸಂಜೆ ನಾಲ್ಕು ಗಂಟೆಗೆ ಪಯ್ಯoಬಳ ದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಸಂಬಂಧೀಕರು ತಿಳಿಸಿದ್ದಾರೆ.