ಮುಹಮ್ಮದ್ ಇಸ್ಮಾಯೀಲ್
ಮಂಗಳೂರು, ಜು. 22: ಕೃಷ್ಣಾಪುರ ನಿವಾಸಿ ಮುಹಮ್ಮದ್ ಇಸ್ಮಾಯೀಲ್ (50) ಇಂದು ಸಂಜೆ ಕೃಷ್ಣಾಪುರದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಅವರು ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬೀಡಿ ಬ್ರಾಂಚ್ ನಡೆಸುತ್ತಿದ್ದ ಅವರು ಜನನುರಾಗಿಯಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅವರ ಅಂತ್ಯಸಂಸ್ಕಾರವು ಜು. 23ರಂದು ಮಧ್ಯಾಹ್ನ ಕೃಷ್ಣಾಪುರದ ಈದ್ಗಾ ಮೈದಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story